ಜಿಲ್ಲಾಧಿಕಾರಿ ಎದುರೇ ವಕೀಲರಿಗೆ ಬೆದರಿಕೆ ಆರೋಪ: ಬೆದರಿಕೆಯೊಡ್ಡಿದ ವ್ಯಕ್ತಿ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ವಕೀಲರ ಸಂಘ


ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.

ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.

ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.

ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago