ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಆಗಮಿಸಿ ಮನೆಯಿಂದಲೇ ಸಿರಿಧಾನ್ಯಗಳಿಂದ ತಯಾರಿಸಿದ್ದ ಸಿಹಿ, ಖಾರ ಮತ್ತು ಮರೆತು ಹೋದ ವಿವಿಧ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಿದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹಾಗೂ ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ವಿವಿಧ ಖಾದ್ಯಗಳನ್ನು ಸೇವನೆ ಮಾಡುವ ಮೂಲಕ ಸಿರಿಧಾನ್ಯಗಳ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ 32 ರೈತ ಮಹಿಳೆಯರು ಭಾಗವಹಿಸಿದ್ದರು. ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಅಥವಾ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಂಡು ಮೂವರಿಗೆ ಬಹುಮಾನ ವಿತರಿಸಲಾಯಿತು. ಮೂವರು ರೈತ ಮಹಿಳೆಯರು ರಾಜ್ಯ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…