ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಆಗಮಿಸಿ ಮನೆಯಿಂದಲೇ ಸಿರಿಧಾನ್ಯಗಳಿಂದ ತಯಾರಿಸಿದ್ದ ಸಿಹಿ, ಖಾರ ಮತ್ತು ಮರೆತು ಹೋದ ವಿವಿಧ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಿದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹಾಗೂ ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ವಿವಿಧ ಖಾದ್ಯಗಳನ್ನು ಸೇವನೆ ಮಾಡುವ ಮೂಲಕ ಸಿರಿಧಾನ್ಯಗಳ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ 32 ರೈತ ಮಹಿಳೆಯರು ಭಾಗವಹಿಸಿದ್ದರು. ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಅಥವಾ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಂಡು ಮೂವರಿಗೆ ಬಹುಮಾನ ವಿತರಿಸಲಾಯಿತು. ಮೂವರು ರೈತ ಮಹಿಳೆಯರು ರಾಜ್ಯ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…