ಕೃಷಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ ಹಾಗೂ ಆತ್ಮ ಯೋಜನೆಯಡಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮಹಿಳೆಯರು ಆಗಮಿಸಿ ಮನೆಯಿಂದಲೇ ಸಿರಿಧಾನ್ಯಗಳಿಂದ ತಯಾರಿಸಿದ್ದ ಸಿಹಿ, ಖಾರ ಮತ್ತು ಮರೆತು ಹೋದ ವಿವಿಧ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಿದರು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹಾಗೂ ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ವಿವಿಧ ಖಾದ್ಯಗಳನ್ನು ಸೇವನೆ ಮಾಡುವ ಮೂಲಕ ಸಿರಿಧಾನ್ಯಗಳ ಸೇವನೆಯಿಂದ ಆಗುವ ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ 32 ರೈತ ಮಹಿಳೆಯರು ಭಾಗವಹಿಸಿದ್ದರು. ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಅಥವಾ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಂಡು ಮೂವರಿಗೆ ಬಹುಮಾನ ವಿತರಿಸಲಾಯಿತು. ಮೂವರು ರೈತ ಮಹಿಳೆಯರು ರಾಜ್ಯ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…