Categories: ಕೋಲಾರ

ಜಿಲ್ಲಾ ಆಸ್ಪತ್ರೆಗೆ ಖಾಯಂ ಶಸ್ತ್ರಚಿಕಿತ್ಸಕರ ನೇಮಕ ಸೇರಿದಂತೆ ಸೌಲಭ್ಯಗಳಿಗಾಗಿ ರೈತ ಸಂಘ ಒತ್ತಾಯ

ಕೋಲಾರ: ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸಿ ಖಾಸಗಿ ಅಂಬ್ಯುಲೆನ್ಸ್ ದಂದೆಗೆ ಕಡಿವಾಣ ಹಾಕಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಡ ರೈತ, ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತ ಸಂಘದ ಕೆ.ನಾರಾಯಣಗೌಡ ಆರೋಗ್ಯ ಸಚಿವರನ್ನು ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಾ. ವಿಜಯ್‌ಕುಮಾರ್‌ರವರು ನಿವೃತ್ತಿ ಆಗಿ 15 ದಿನ ಕಳೆದರೂ ಸರ್ಕಾರ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡದೆ ಮೀನಾಮೇಷ ಎಣಿಸುತ್ತಿದ್ದು, ಜಿಲ್ಲಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿರುವ ಬಡ ರೈತ, ಕೂಲಿ ಕಾರ್ಮಿಕರು ಸಮರ್ಪಕವಾಗಿ ಚಿಕಿತ್ಸೆ ಪಡೆಯದೆ ರಕ್ತ ಪರೀಕ್ಷೆಯಿಂದ ಇಡಿದು ಅಂಬ್ಯುಲೆನ್ಸ್ ಖಾಸಗಿಯವರನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನೇ ಬಂಡವಾಳ ಮಾಡಿಕೊಂಡು ಲಕ್ಷ ಲಕ್ಷ ಹಣವನ್ನು ಲೂಟಿ ಮಾಡುತ್ತಿದ್ದಾರೆಂದು ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ತುರ್ತು ಪರಿಸ್ಥಿತಿ ಹೆರಿಗೆ ವಿಭಾಗ ಹಾಗೂ ರೋಗಿಗಳ ವಾರ್ಡ್ ಗಳಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಸಿಗದೆ ನರ್ಸ್ ಗಳು ರೋಗಿಗಳಿಗೆ ಸ್ಪಂದಿಸದೆ ಪರದಾಡುವಂತಹ ಪರಿಸ್ಥಿತಿ ಇರುವ ಜೊತೆಗೆ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಕೆಲಸ ಮಾಡುವ ವೈದ್ಯರು ಭಯೋಮೆಟ್ರಿಕ್‌ನಲ್ಲಿ ಹಾಜರಾತಿ ಹಾಕಬೇಕು.
ಆದರೆ, ಇದನ್ನು ಯಾವುದೇ ವೈದ್ಯರು ಮತ್ತು ಸಿಬ್ಬಂದಿ ಅನುಸರಿಸುತ್ತಿಲ್ಲ. ಇದರಿಂದ ಆಸ್ಪತ್ರೆಯ ಅವ್ಯವಸ್ಥೆ ಜೊತೆಗೆ ಸರ್ಕಾರದ ನೂರಾರು ಕೋಟಿ ವೆಚ್ಚದಲ್ಲಿ ನೀಡಿರುವ ವೆಂಟಿಲೇಟರ್, ಡಯಾಲೀಸಿಸ್, ಹಾಗೂ ತುರ್ತು ನಿಘಾಘಟಕದ ಉಪ ಕರಣಗಳನ್ನು ನುರಿತ ವೈದ್ಯರು ಇಲ್ಲದೆ ಕೊಠಡಿಗಳಲ್ಲಿ ದೂಳು ಹಿಡಿಯುತ್ತಿದೆ. ಇದಕ್ಕೆ ಸಂಬಂಧಪಟ್ಟ ರೋಗಿಗಳು ಸಮರ್ಪಕವಾದ ಚಿಕಿತ್ಸೆ ದೊರೆಯದೆ ದುಬಾರಿ ಖಾಸಗಿ ಆಸ್ಪತ್ರೆಗಳ ಬಿಲ್ ಕಟ್ಟದೆ ಪ್ರಾಣವನ್ನು ಕಳೆದುಕೊಳ್ಳುವ ಸನ್ನಿವೇಶಗಳು ಹೆಚ್ಚಾಗುತ್ತಿವೆ. ಸಂಬಂಧಪಟ್ಟ ಆರೋಗ್ಯ ಸಚಿವರು ಹಾಗೂ ಜನ ಪ್ರತಿನಿಧಿಗಳು ಆಸ್ಪತ್ರೆಗೆ ಬೇಟಿ ಕೊಟ್ಟಾಗ ಯಾವುದೇ ಸಮಸ್ಯೆ ಇಲ್ಲವೆಂದು ಹೇಳುವ ವೈದ್ಯರು ಆ ನಂತರ ರೋಗಿಗಳ ಪಾಡು ಕೇಳುವವರು ಇಲ್ಲದಂತಾಗಿದೆ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ನೂರಾರು ವರ್ಷಗಳ ಇತಿಹಾಸ ಇರುವ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಜೊತೆಗೆ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದರೆ ಹುಟ್ಟಿದ ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ತಂದೆ ಸಾವಿರ ರೂಪಾಯಿ ಲಂಚ ನೀಡಬೇಕು. ಅದೇ ತಂದೆ ಮರಣ ನಂತರ ಮಗ ತಂದೆಯ ಮರಣ ಪ್ರಮಾಣ ಪತ್ರ ಪಡೆಯಲು ಲಂಚ ನೀಡಬೇಕಾದ ಪರಿಸ್ಥಿತಿಯ ಜೊತೆಗೆ ಸೂಜಿಯಿಂದ ಮಾತ್ರೆಯವರೆಗೂ ಲಂಚ ಹಾಗೂ ದಲ್ಲಾಳಿಗಳ ನೆರವಿಲ್ಲದೆ, ಬಡವರ ನೆರಳು ಆಸ್ಪತ್ರೆಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಆಸ್ಪತ್ರೆ ಹದಗೆಟ್ಟಿದೆ ಎಂದು ಕಿಡಿ ಕಾರಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಮರಿಚೀಕೆ ಆಗಿದೆ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಶೌಚಾಲಯಗಳ ಸ್ವಚ್ಚತೆಗೆ ನೀರಿಲ್ಲದೆ ಗಬ್ಬು ನಾರುತ್ತಿವೆ ಆರೋಗ್ಯವಾಗಿ ಆನಾರೋಗ್ಯ ಪೀಡಿತರಾಗುವ ಮಟ್ಟಕ್ಕೆ ಸರ್ಕಾರಿ ಆಸ್ಪತ್ರೆ ಹದಗೆಟ್ಟಿದೆ. ಮತ್ತೊಂದೆಡೆ ಸರ್ಕಾರಿ ಆರೋಗ್ಯ ಸುತ್ತೊಲೆ ಪ್ರಕಾರ ೧೦೦ ಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆ , ಪರೀಕ್ಷಾ ಕೇಂದ್ರಗಳು ಇರಬಾರದೆಂಬ ಆದೇಶವಿದ್ದರೂ ನಾಯಿಕೊಡೆಗಳಂತೆ ಸರ್ಕಾರಿ ಆಸ್ಪತ್ರೆಗಳ ಸುತ್ತ ನಾಯಿಕೊಡೆಗಳಂತೆ ತಲೆ ಎತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಆಸ್ಪತ್ರೆ ಸಿಬ್ಬಂದಿ ನಾಪತ್ತೆ ಆಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.

ತುರ್ತು ಪರಿಸ್ಥಿತಿಯಲ್ಲಿ ಬಡ ರೋಗಿಗಳಿಗೆ ಅನುಕೂಲವಾಗಬೇಕಾದ ಸರ್ಕಾರಿ ಅಂಬುಲೆನ್ಸ್ ಸೇವೆ ಇಂದು ಆಸ್ಪತ್ರೆಯ ಮುಂಭಾಗದಲ್ಲಿರುವ ಖಾಸಗಿ ಆಂಬುಲೆನ್ಸ್ಗಳ ಹಾವಳಿಗೆ ಬಡ ರೋಗಿಗಳ ಪೋಷಕರು ತತ್ತರಿಸುತ್ತಿದ್ದಾರೆ. ಸಮರ್ಪಕವಾಗಿ ಸರ್ಕಾರಿ ಸೇವೆ ನೀಡದ ಆಂಬುಲೆನ್ಸ್ ಚಾಲಕರು ಖಾಸಗಿ ಅಂಬುಲೆನ್ಸ್ ಜೊತೆ ಒಪ್ಪಂದ ಮಾಡಿಕೊಂಡು ಬಡವರ ರಕ್ತ ಹೀರುವ ದಂದೆಯಾಗಿ ಮಾರ್ಪಟ್ಟಿದೆ ಎಂದು ದೂರಿದರು.
೨೪ ಗಂಟೆಯಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತç ಚಿಕಿತ್ಸಕರನ್ನು ನೇಮಕ ಮಾಡಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸಿ ಖಾಸಗಿ ಅಂಬ್ಯೂಲೆನ್ಸ್ ದಂದೆಗೆ ಕಡಿವಾಣ ಹಾಕಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಡ ರೈತ ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡುವ ಜೊತೆಗೆ ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅನಿಲ್, ರಾಮಸಾಗರ ವೇಣು, ಸುಪ್ರೀಂ ಚಲ, ಗಂಗಾದರ್, ಬಾಬು, ಮಂಗಸಂದ್ರ ತಿಮ್ಮಣ್ಣ, ಕುವಣ್ಣ, ಯಲ್ಲಣ್ಣ, ಮಾಸ್ತಿ ಹರೀಶ್, ಮುನಿರಾಜು, ಶೈಲಜ, ರೂಪ, ರಾಧ, ಚೌಡಮ್ಮ ಮುಂತಾದವರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

4 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

5 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

10 hours ago