ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.
ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…