ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ‌ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.

ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…

26 minutes ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…

1 hour ago

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…

2 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ…

3 hours ago

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

7 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

9 hours ago