ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.
ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…