ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ‌ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.

ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago