ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.
ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…