Categories: ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರಿಂದ ಎರಡು ವಾರಗಳ ಕಾಲ ಜಿಲ್ಲಾ ಪ್ರವಾಸ: ಬರ ಪರಿಸ್ಥಿತಿ, ಬರ ಪರಿಹಾರ ಪರಿಶೀಲನಾ ವರದಿ ನೀಡಲು ಸಿಎಂ ಸೂಚನೆ

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ ಸೇರಿದಂತೆ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ, ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರ ಹಿನ್ನೆಲೆ ಜನ-ಜಾನುವಾರುಗಳಿಗೆ  ನೀರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆ ಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣಾ ಕ್ರಮಗಳನ್ನ ಕೈಗೊಳ್ಳವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಅವರಿಗೂ ಹಲವು ಬಾರಿ ನಿರ್ದೇಶನ ನೀಡಲಾಗಿದೆ.

ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಇನ್ನೆರಡು ವಾರದಲ್ಲಿ ತಮ್ಮ ತಮ್ಮ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆ ನಷ್ಟದ ಸ್ಥಿತಿಗತಿ ಪರಿಶೀಲಿಸಿ ಪರಿಸ್ಥಿಯನ್ನ ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಠಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯ ಇರುವ ಕಡೆ ಭೇಟಿ ನೀಡಿ ಪರಿಶೀಲಿಸುವುದು,  ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವುದು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

58 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago