ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ ಸೇರಿದಂತೆ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ, ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರ ಹಿನ್ನೆಲೆ ಜನ-ಜಾನುವಾರುಗಳಿಗೆ ನೀರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆ ಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣಾ ಕ್ರಮಗಳನ್ನ ಕೈಗೊಳ್ಳವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಅವರಿಗೂ ಹಲವು ಬಾರಿ ನಿರ್ದೇಶನ ನೀಡಲಾಗಿದೆ.
ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಇನ್ನೆರಡು ವಾರದಲ್ಲಿ ತಮ್ಮ ತಮ್ಮ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆ ನಷ್ಟದ ಸ್ಥಿತಿಗತಿ ಪರಿಶೀಲಿಸಿ ಪರಿಸ್ಥಿಯನ್ನ ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಠಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯ ಇರುವ ಕಡೆ ಭೇಟಿ ನೀಡಿ ಪರಿಶೀಲಿಸುವುದು, ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವುದು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…