ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ: 98 ಅಹವಾಲು ಸ್ವೀಕಾರ: ಸಾರ್ವಜನಿಕರ ಅಹವಾಲು ಶೀಘ್ರ ಇತ್ಯರ್ಥ ಪಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇಂದು ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಕೆಲಸಕಾರ್ಯಗಳು ತ್ವರಿತವಾಗಿ ಆಗಬೇಕು. ಸರ್ಕಾರಿ ಸೇವೆ ಜನರ ಸೇವೆಗಾಗಿ ಇರುವುದು. ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಅಲೆಯುತ್ತಾರೆ. ಅವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದು ರಿಂದ ಸಮಯ ಉಳಿತಾಯವಾಗಿ, ಅಧಿಕಾರಿಗಳು ಕಾರ್ಯ ಕ್ಷಮತೆ ಹೆಚ್ಚುತ್ತದೆ ಎಂದು ಸಚಿವರು ಹೇಳಿದರು.

ನಿರಾಶ್ರಿತರ ಗೆ ಮನೆ ಒದಗಿಸುವುದು,  ಬಡವರಿಗೆ  ಸೈಟ್ ಹಂಚಿಕೆ,ಪೋಡಿ ದುರಸ್ತಿ ಕಾರ್ಯ, ಜಾಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಗ್ರೇಡ್ 2ತಹಶಿಲ್ದಾರ್ ಉಷಾ,ಸಚಿವರ ವಿಶೇಷಾಧಿಕಾರಿ ವೆಂಕಟೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

58 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

1 hour ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago