ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ: 98 ಅಹವಾಲು ಸ್ವೀಕಾರ: ಸಾರ್ವಜನಿಕರ ಅಹವಾಲು ಶೀಘ್ರ ಇತ್ಯರ್ಥ ಪಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇಂದು ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಕೆಲಸಕಾರ್ಯಗಳು ತ್ವರಿತವಾಗಿ ಆಗಬೇಕು. ಸರ್ಕಾರಿ ಸೇವೆ ಜನರ ಸೇವೆಗಾಗಿ ಇರುವುದು. ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಅಲೆಯುತ್ತಾರೆ. ಅವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದು ರಿಂದ ಸಮಯ ಉಳಿತಾಯವಾಗಿ, ಅಧಿಕಾರಿಗಳು ಕಾರ್ಯ ಕ್ಷಮತೆ ಹೆಚ್ಚುತ್ತದೆ ಎಂದು ಸಚಿವರು ಹೇಳಿದರು.

ನಿರಾಶ್ರಿತರ ಗೆ ಮನೆ ಒದಗಿಸುವುದು,  ಬಡವರಿಗೆ  ಸೈಟ್ ಹಂಚಿಕೆ,ಪೋಡಿ ದುರಸ್ತಿ ಕಾರ್ಯ, ಜಾಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಗ್ರೇಡ್ 2ತಹಶಿಲ್ದಾರ್ ಉಷಾ,ಸಚಿವರ ವಿಶೇಷಾಧಿಕಾರಿ ವೆಂಕಟೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

4 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

7 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

19 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

20 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

22 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago