ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಾರದೊಳಗೆ ಸಭೆ- ಡಿಸಿ ಭರವಸೆ: ಧರಣಿ ತಾತ್ಕಾಲಿಕ ಸ್ಥಗಿತ

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ಒಳಚರಂಡಿ ನೀರು ಹಾಗೂ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ವಿಷಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಅಂರ್ತಜಲ ಕಲುಷಿತಗೊಂಡಿದ್ದು,‌ ಕೆರೆಗಳ ಸೂಕ್ತ ಶುದ್ಧೀಕರಣಕ್ಕೆ ಕ್ರಮ ವಹಿಸದೇ ಇರುವುದನ್ನು ವಿರೋಧಿಸಿ ಹಾಗೂ 3ನೇ ಹಂತದ ಶುದ್ಧೀಕರಣ ಘಟಕಕ್ಕೆ ಒತ್ತಾಯಿಸಿ, ಅರ್ಕಾವತಿ ನದಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು.

ವಿಚಾರ ತಿಳಿದು ಸತ್ಯಾಗ್ರಹದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ಮಾತನಾಡಿದರು.

ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ  ಮುಖಂಡರು, ವಿಷಕಾರಿ ತ್ಯಾಜ್ಯ ನೀರು ಚಿಕ್ಕತುಮಕೂರು ಮತ್ತು ದೊಡ್ಡತುಮಕೂರು ಕೆರೆಯ ಒಡಲು ಸೇರಿದ್ದು, ಸುತ್ತಮುತ್ತಲಿನ ಎರಡು ಗ್ರಾಮ ಪಂಚಾಯಿತಿಯ 17 ಗ್ರಾಮಗಳ ಅಂತರ್ಜಲ ನೀರು ಕುಡಿಯುವುದಕ್ಕೆ ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ. ಈ ಬಗ್ಗೆ ನಾಲ್ಕು ವರ್ಷಗಳಿಂದಲು ಹಲವಾರು ಪ್ರತಿಭಟನೆ, ಮನವಿಗಳನ್ನು ನೀಡುತ್ತಲೇ ಬರುತ್ತಿದ್ದೇವೆ. ಇದರಿಂದ ಯಾವ ಪ್ರಯೋಜನವಾಗಿಲ್ಲ. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದೆವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಈ ಹಿಂದೆ ನೀಡಿದ್ದ ಭರವಸೆಗಳು ಈಡೇರಿಸಿಲ್ಲ. ನೀರು ಶುದ್ಧೀಕರಣಕ್ಕೆ ಸಂಬಂಸಿದಂತೆ 150 ಕೋಟಿ ರೂ. ಯೋಜನಾ ವರದಿಯ ಮಾಹಿತಿ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಇಂತಹ ಯಾವುದೇ ಯೋಜನೆಯು ನಮ್ಮ ಇಲಾಖೆಯ ಗಮನಕ್ಕೆ ಬಂದೇ ಇಲ್ಲ. ಆದರೆ, ಶುದ್ಧೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಉತ್ತರ ನೀಡಿದ್ದಾರೆ.

ಈಗ 3ನೇ ಶುದ್ಧೀಕರಣ ಘಟಕದ ಅಗತ್ಯವಿದೆ. ಈ ಹೇಳಿಕೆಗಳು ಗೊಂದಲ ಮೂಡಿಸುತ್ತಿವೆ. ಈ ಹಿಂದೆ ಭರವಸೆ ನೀಡಿದಂತೆ ಈ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ತೆರೆಸಿಲ್ಲ. ಮಳೆ ನೀರು ಕೊಯ್ಲು ಅಳವಡಿಕೆಗೆ ಅನುದಾನ ಬಿಡುಗಡೆಯಾಗಿಲ್ಲ. ನೂರಾರು ಕೈಗಾರಿಕೆಗಳಿರುವ ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಇದುವರೆಗೂ ಸ್ಥಳಾಂತರವಾಗಿಲ್ಲ. ಚೆನ್ನೈ ಹಸಿರು ನ್ಯಾಯಮಂಡಲಿ ನೀಡಿರುವ ನಿರ್ದೇಶನಗಳನ್ನು ಸಹ ಇಲ್ಲಿನ ಅಕಾರಿಗಳು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಸದನದಲ್ಲಿ ಚರ್ಚೆಯಾಗಿರುವಂತೆ ನಗರಸಭೆ ಒಳಚರಂಡಿ ಕಾಮಗಾರಿಯ ಹೊಸ ಮಾರ್ಗಗಳು ಹಾಗೂ ನವೀಕರಣ ಹಾಗೂ ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ ಸೇರಿ ಅಂದಾಜು 137 ಕೋಟಿ ರೂ.ಗಳ ಪ್ರಸ್ತಾವನೆಯಾಗಿದ್ದು, ಇದು ಬರೀ ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ ಮಾತ್ರ ಎಂದು ಬಿಂಬಿತವಾಗಿದ್ದು, ತಪ್ಪು ಸಂದೇಶ ರವಾನೆಯಾಗಿದೆ ಎಂದು ತಿಳಿಸಿದರು.

ಇದು ಸಂವಹನ ಕೊರತೆಯಿಂದಾಗಿದೆ ಹೊರತು ಉದ್ದೇಶ ಪೂರ್ವಕವಲ್ಲ. ಈ ಬಗ್ಗೆ  ಚರ್ಚೆ ನಡೆಸಿದ್ದೇವೆ. ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ 57 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಎಸ್‌ಟಿಪಿ ಘಟಕಕ್ಕೆ ಜಾಗ ಸಹ ಗುರುತಿಸಲಾಗಿದೆ. ಈ ಹಿಂದೆ ಭರವಸೆ ನೀಡಿದಂತೆ ಕಾಮಗಾರಿಗಳು ವಿಳಂಬವಾಗಿರುವುದು ನಿಜ. ಆದರೆ, ಸ್ಥಗಿತವಾಗಿಲ್ಲ. ಕಾಡನೂರು ಬಳಿಯಿಂದ ಕೊಳವೆ ಬಾವಿಗಳ ಮೂಲಕ ನೀರುಣಿಸುವ 12 ಕೋಟಿ ರೂ.ಯೋಜನೆ ಸಹ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಮಳೆ ನೀರು ಕೊಯ್ಲು ಯೋಜನೆ ರೂಪಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಾರದೊಳಗೆ ಸಭೆ: 

ಕುಡಿಯುವ ನೀರು ನಮ್ಮ ಹಕ್ಕು. ಆದರೆ ನಮಗೆ ವಿಷ ನೀರು ಕುಡಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಹಾಗೂ ಸರ್ಕಾರದ ನಡುವೆ ಆಗಿರುವ ಪತ್ರ ವ್ಯವಹಾರದ ಮಾಹಿತಿ ನೀಡಿ, ನಮಗೆ ಸಮಾಧಾನವಾದರೆ ಮಾತ್ರ ಸತ್ಯಾಗ್ರಹ ಕೈಬಿಡುತ್ತೇವೆ.

ಸಂಬಂಧಪಟ್ಟ ಇಲಾಖೆಯ ಸಚಿವರು ತಮಗೆ ಅರಿವಿಲ್ಲ ಎಂದು ಹೇಳುತ್ತಿರುವುದರಿಂದ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರ ಸಭೆ ನಡೆಸಬೇಕು. ಶುದ್ಧೀಕರಣ ಘಟಕ ಸ್ಥಾಪನೆಗೆ ಸ್ಪಷ್ಟ ಭರವಸೆ ಬೇಕು. ಬಾಯಿ ಮಾತಿನ ಭರವಸೆಗಳು ನಮಗೆ ಬೇಡ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖಂಡರ ಸಭೆ ಕರೆದು, ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಇನ್ನೆರಡು ವಾರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲು ವ್ಯವಸ್ಥೆ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ ಇಒ, ನಗರಸಭೆ ಪೌರಾಯುಕ್ತ, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago