ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಾರದೊಳಗೆ ಸಭೆ- ಡಿಸಿ ಭರವಸೆ: ಧರಣಿ ತಾತ್ಕಾಲಿಕ ಸ್ಥಗಿತ

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ಒಳಚರಂಡಿ ನೀರು ಹಾಗೂ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ವಿಷಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಅಂರ್ತಜಲ ಕಲುಷಿತಗೊಂಡಿದ್ದು,‌ ಕೆರೆಗಳ ಸೂಕ್ತ ಶುದ್ಧೀಕರಣಕ್ಕೆ ಕ್ರಮ ವಹಿಸದೇ ಇರುವುದನ್ನು ವಿರೋಧಿಸಿ ಹಾಗೂ 3ನೇ ಹಂತದ ಶುದ್ಧೀಕರಣ ಘಟಕಕ್ಕೆ ಒತ್ತಾಯಿಸಿ, ಅರ್ಕಾವತಿ ನದಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು.

ವಿಚಾರ ತಿಳಿದು ಸತ್ಯಾಗ್ರಹದ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ಮಾತನಾಡಿದರು.

ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ  ಮುಖಂಡರು, ವಿಷಕಾರಿ ತ್ಯಾಜ್ಯ ನೀರು ಚಿಕ್ಕತುಮಕೂರು ಮತ್ತು ದೊಡ್ಡತುಮಕೂರು ಕೆರೆಯ ಒಡಲು ಸೇರಿದ್ದು, ಸುತ್ತಮುತ್ತಲಿನ ಎರಡು ಗ್ರಾಮ ಪಂಚಾಯಿತಿಯ 17 ಗ್ರಾಮಗಳ ಅಂತರ್ಜಲ ನೀರು ಕುಡಿಯುವುದಕ್ಕೆ ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ. ಈ ಬಗ್ಗೆ ನಾಲ್ಕು ವರ್ಷಗಳಿಂದಲು ಹಲವಾರು ಪ್ರತಿಭಟನೆ, ಮನವಿಗಳನ್ನು ನೀಡುತ್ತಲೇ ಬರುತ್ತಿದ್ದೇವೆ. ಇದರಿಂದ ಯಾವ ಪ್ರಯೋಜನವಾಗಿಲ್ಲ. ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದೆವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಈ ಹಿಂದೆ ನೀಡಿದ್ದ ಭರವಸೆಗಳು ಈಡೇರಿಸಿಲ್ಲ. ನೀರು ಶುದ್ಧೀಕರಣಕ್ಕೆ ಸಂಬಂಸಿದಂತೆ 150 ಕೋಟಿ ರೂ. ಯೋಜನಾ ವರದಿಯ ಮಾಹಿತಿ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಇಂತಹ ಯಾವುದೇ ಯೋಜನೆಯು ನಮ್ಮ ಇಲಾಖೆಯ ಗಮನಕ್ಕೆ ಬಂದೇ ಇಲ್ಲ. ಆದರೆ, ಶುದ್ಧೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಉತ್ತರ ನೀಡಿದ್ದಾರೆ.

ಈಗ 3ನೇ ಶುದ್ಧೀಕರಣ ಘಟಕದ ಅಗತ್ಯವಿದೆ. ಈ ಹೇಳಿಕೆಗಳು ಗೊಂದಲ ಮೂಡಿಸುತ್ತಿವೆ. ಈ ಹಿಂದೆ ಭರವಸೆ ನೀಡಿದಂತೆ ಈ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ತೆರೆಸಿಲ್ಲ. ಮಳೆ ನೀರು ಕೊಯ್ಲು ಅಳವಡಿಕೆಗೆ ಅನುದಾನ ಬಿಡುಗಡೆಯಾಗಿಲ್ಲ. ನೂರಾರು ಕೈಗಾರಿಕೆಗಳಿರುವ ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಇದುವರೆಗೂ ಸ್ಥಳಾಂತರವಾಗಿಲ್ಲ. ಚೆನ್ನೈ ಹಸಿರು ನ್ಯಾಯಮಂಡಲಿ ನೀಡಿರುವ ನಿರ್ದೇಶನಗಳನ್ನು ಸಹ ಇಲ್ಲಿನ ಅಕಾರಿಗಳು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಸದನದಲ್ಲಿ ಚರ್ಚೆಯಾಗಿರುವಂತೆ ನಗರಸಭೆ ಒಳಚರಂಡಿ ಕಾಮಗಾರಿಯ ಹೊಸ ಮಾರ್ಗಗಳು ಹಾಗೂ ನವೀಕರಣ ಹಾಗೂ ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ ಸೇರಿ ಅಂದಾಜು 137 ಕೋಟಿ ರೂ.ಗಳ ಪ್ರಸ್ತಾವನೆಯಾಗಿದ್ದು, ಇದು ಬರೀ ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ ಮಾತ್ರ ಎಂದು ಬಿಂಬಿತವಾಗಿದ್ದು, ತಪ್ಪು ಸಂದೇಶ ರವಾನೆಯಾಗಿದೆ ಎಂದು ತಿಳಿಸಿದರು.

ಇದು ಸಂವಹನ ಕೊರತೆಯಿಂದಾಗಿದೆ ಹೊರತು ಉದ್ದೇಶ ಪೂರ್ವಕವಲ್ಲ. ಈ ಬಗ್ಗೆ  ಚರ್ಚೆ ನಡೆಸಿದ್ದೇವೆ. ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪನೆಗೆ 57 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಎಸ್‌ಟಿಪಿ ಘಟಕಕ್ಕೆ ಜಾಗ ಸಹ ಗುರುತಿಸಲಾಗಿದೆ. ಈ ಹಿಂದೆ ಭರವಸೆ ನೀಡಿದಂತೆ ಕಾಮಗಾರಿಗಳು ವಿಳಂಬವಾಗಿರುವುದು ನಿಜ. ಆದರೆ, ಸ್ಥಗಿತವಾಗಿಲ್ಲ. ಕಾಡನೂರು ಬಳಿಯಿಂದ ಕೊಳವೆ ಬಾವಿಗಳ ಮೂಲಕ ನೀರುಣಿಸುವ 12 ಕೋಟಿ ರೂ.ಯೋಜನೆ ಸಹ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಮಳೆ ನೀರು ಕೊಯ್ಲು ಯೋಜನೆ ರೂಪಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಾರದೊಳಗೆ ಸಭೆ: 

ಕುಡಿಯುವ ನೀರು ನಮ್ಮ ಹಕ್ಕು. ಆದರೆ ನಮಗೆ ವಿಷ ನೀರು ಕುಡಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಹಾಗೂ ಸರ್ಕಾರದ ನಡುವೆ ಆಗಿರುವ ಪತ್ರ ವ್ಯವಹಾರದ ಮಾಹಿತಿ ನೀಡಿ, ನಮಗೆ ಸಮಾಧಾನವಾದರೆ ಮಾತ್ರ ಸತ್ಯಾಗ್ರಹ ಕೈಬಿಡುತ್ತೇವೆ.

ಸಂಬಂಧಪಟ್ಟ ಇಲಾಖೆಯ ಸಚಿವರು ತಮಗೆ ಅರಿವಿಲ್ಲ ಎಂದು ಹೇಳುತ್ತಿರುವುದರಿಂದ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರ ಸಭೆ ನಡೆಸಬೇಕು. ಶುದ್ಧೀಕರಣ ಘಟಕ ಸ್ಥಾಪನೆಗೆ ಸ್ಪಷ್ಟ ಭರವಸೆ ಬೇಕು. ಬಾಯಿ ಮಾತಿನ ಭರವಸೆಗಳು ನಮಗೆ ಬೇಡ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖಂಡರ ಸಭೆ ಕರೆದು, ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಇನ್ನೆರಡು ವಾರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲು ವ್ಯವಸ್ಥೆ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ತಾ.ಪಂ ಇಒ, ನಗರಸಭೆ ಪೌರಾಯುಕ್ತ, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

13 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

14 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

19 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago