ಕೋಲಾರ: ಹಲವಾರು ಮಹನೀಯರ ತ್ಯಾಗ, ಬಲಿದಾನದಿಂದ ಪಡೆದಿರುವ ಸ್ವಾತಂತ್ರವನ್ನು ಇಂದಿನ ಜನತೆ ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ೭೮ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ರಾಜಕೀಯ ಸ್ವಾತಂತ್ರ್ಯವನ್ನು ಕೊಟ್ಟರೆ ಅಂಬೇಡ್ಕರ್ ಅವರು ಸಮಾಜಿಕ ನ್ಯಾಯದ ಸ್ವಾತಂತ್ರ್ಯವನ್ನು ನೀಡಿದ್ದಾರೆ ಸ್ವಾತಂತ್ರ್ಯದ ಆಶಯಗಳಿಗೆ ಬೆಲೆ ಸಿಗಬೇಕಾದರೆ ದೇಶದಲ್ಲಿ ಧರ್ಮ, ಜಾತಿ, ಭಾಷೆಗಳು ಒಗ್ಗಟ್ಟಿನಿಂದ ಅಹಿಂಸೆಯನ್ನು ಕಾಣಬೇಕಾಗಿದೆ ಜನರು ನೆಮ್ಮದಿ, ಶಾಂತಿಯಿಂದ ಬದುಕುವಂತಹ ವಾತಾವರಣವನ್ನು ನಿರ್ಮಾಣವಾಗುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ರಂಗನಾಥ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಮುಖಂಡರಾದ ಒಬಿಸಿ ಮಂಜುನಾಥ್, ವೆಂಕಟಪತಿ, ಗಂಗಮ್ಮನಪಾಳ್ಯ ರಾಮಯ್ಯ, ರೌತ್ ಶಂಕರಪ್ಪ, ಕೆ.ಆರ್ ತ್ಯಾಗರಾಜ್, ಕೃಷ್ಣೇಗೌಡ, ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…