ಕೋಲಾರ: ಹಲವಾರು ಮಹನೀಯರ ತ್ಯಾಗ, ಬಲಿದಾನದಿಂದ ಪಡೆದಿರುವ ಸ್ವಾತಂತ್ರವನ್ನು ಇಂದಿನ ಜನತೆ ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ೭೮ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ರಾಜಕೀಯ ಸ್ವಾತಂತ್ರ್ಯವನ್ನು ಕೊಟ್ಟರೆ ಅಂಬೇಡ್ಕರ್ ಅವರು ಸಮಾಜಿಕ ನ್ಯಾಯದ ಸ್ವಾತಂತ್ರ್ಯವನ್ನು ನೀಡಿದ್ದಾರೆ ಸ್ವಾತಂತ್ರ್ಯದ ಆಶಯಗಳಿಗೆ ಬೆಲೆ ಸಿಗಬೇಕಾದರೆ ದೇಶದಲ್ಲಿ ಧರ್ಮ, ಜಾತಿ, ಭಾಷೆಗಳು ಒಗ್ಗಟ್ಟಿನಿಂದ ಅಹಿಂಸೆಯನ್ನು ಕಾಣಬೇಕಾಗಿದೆ ಜನರು ನೆಮ್ಮದಿ, ಶಾಂತಿಯಿಂದ ಬದುಕುವಂತಹ ವಾತಾವರಣವನ್ನು ನಿರ್ಮಾಣವಾಗುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ರಂಗನಾಥ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಮುಖಂಡರಾದ ಒಬಿಸಿ ಮಂಜುನಾಥ್, ವೆಂಕಟಪತಿ, ಗಂಗಮ್ಮನಪಾಳ್ಯ ರಾಮಯ್ಯ, ರೌತ್ ಶಂಕರಪ್ಪ, ಕೆ.ಆರ್ ತ್ಯಾಗರಾಜ್, ಕೃಷ್ಣೇಗೌಡ, ಮುಂತಾದವರು ಇದ್ದರು
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…