Categories: ಕೋಲಾರ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ವೈ ಶಿವಕುಮಾರ್ ನೇಮಕ: ಅಭಿನಂದನೆ

ಕೋಲಾರ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ಶಿವಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಭಾನುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸರಕಾರ ರಚನೆಯಾದ ಮೇಲೆ ಅನುಷ್ಠಾನ ಮಾಡಿದ್ದು, ಅದನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಪ್ರಾಧಿಕಾರವನ್ನು ರಚನೆ ಮಾಡಲಾಗಿದ್ದು ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಈ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿರಬಹುದು ಅವರನ್ನು ಗುರುತಿಸಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕು ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷವು ಜಾರಿ ಮಾಡಿದ್ದು ಸದುಪಯೋಗವಾಗುವಂತೆ ಸಮಿತಿಯು ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು

ಸಮಿತಿಯ ಉಪಾಧ್ಯಕ್ಷರಾಗಿ ಹಿದಾಯತ್, ಎ ಅಶ್ವಥ್ ರೆಡ್ಡಿ, ಎನ್ ನಾಗೇಶ್ವರಿ, ಸದಸ್ಯರಾಗಿ ವಕ್ಕಲೇರಿ ರಾಜಪ್ಪ, ರಾಧಾಕೃಷ್ಣರೆಡ್ಡಿ, ಎಂ.ಅಂಜಿನಪ್ಪ, ಎಂ.ಸಿ ನೀಲಕಂಠೇಗೌಡ, ಎಸ್.ವಿ ಪಾರ್ಥಸಾರಥಿ, ಎ.ವಿ ಮನೋಹರ್, ಮಮತಾರೆಡ್ಡಿ, ಮಹಮ್ಮದ್ ಮುನೀರ್, ಎಸ್. ಉಮಾದೇವಿ, ಎನ್ ಭಾಗ್ಯಮ್ಮ, ವಿ ಮಂಜುಳ ಆಯ್ಕೆಯಾಗಿದ್ದು ಸಮಿತಿಗೆ ಅಪರ ಜಿಲ್ಲಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ನೂತನ ಅಧ್ಯಕ್ಷ ವೈ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಗದ್ದೆಕಣ್ಣೂರು ದಯಾನಂದ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಹಿರಿಯ ಮುಖಂಡ ಮಣಿಘಟ್ಟ ಸೊಣ್ಣೆಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಛತ್ರಕೋಡಿಹಳ್ಳಿ ಮಂಜುನಾಥ್, ನುಕ್ಕನಹಳ್ಳಿ ಶ್ರೀನಿವಾಸ್, ಮೈಲಾಂಡಹಳ್ಳಿ ಮುರುಳಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಜನಪನಹಳ್ಳಿ ನವೀನ್ ಕುಮಾರ್, ಆಚಟ್ನಹಳ್ಳಿ ಮನು ಮುಂತಾದವರು ಇದ್ದರು

Ramesh Babu

Journalist

Recent Posts

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

2 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

3 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

7 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

19 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

20 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

20 hours ago