ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶಿಸಿದೆ.
ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ 25ಸಾವಿರದಿಂದ 35ಸಾವಿರಕ್ಕೆ ಹೆಚ್ಚಳ. ಜಿಲ್ಲಾ ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ಒಂದು ಲಕ್ಷದಿಂದ ರೂ. 1.5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ತಳಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿಯವರು ತಮ್ಮ ಪರಿಶ್ರಮ ಮತ್ತು ಶ್ರದ್ಧೆಯಿಂದಾಗಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿ, ಮಹರ್ಷಿಯಾದವರು. ಆದ್ದರಿಂದ ವಾಲ್ಮೀಕಿ ಅವರ ಜಯಂತಿಯನ್ನು ಅದ್ಧೂರಿಯಾಗಿಯಷ್ಟೇ ಅಲ್ಲ ಅರ್ಥಪೂರ್ಣವಾಗಿ ಆಚರಿಸಿ, ಅವರ ಜೀವನ ಸಾಧನೆಗಳು ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…