ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್.ಅನುರಾಧಾ ನೇತೃತ್ವದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ರವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮ, ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆ, ಸಂಜೀವಿನಿ, ಗೃಹಲಕ್ಷ್ಮಿ ಯೋಜನೆ ಹಾಗೂ ಇತರೆ ಪಂಚಾಯತ್ ರಾಜ್ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ವೀರಯೋಧರಿಗೆ ಗೌರವ ಸಲ್ಲಿಸಲು ಅಮೃತ ಸರೋವರ ಅಥವಾ ಗ್ರಾಮ ಪಂಚಾಯಿತಿ ಹತ್ತಿರ ಶಿಲಾಫಲಕ ನಿರ್ಮಾಣ ಮಾಡಿ ವಿಶೇಷ ಚಟುವಟಿಕೆಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಮಾತನಾಡಿ, ಮೇರಾ ಮಟ್ಟಿ ಮೇರಾ ದೇಶ್ ಕಾರ್ಯಕ್ರಮದ ಭಾಗವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ 75 ವಿವಿಧ ಬಗೆಯ ಸಸಿಗಳನ್ನು ನೆಡಲು ಪಿಡಿಒಗಳಿಗೆ ತಿಳಿಸಿದರು.

ಈ ವೇಳೆ ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ, ಸಹಾಯಕ ನಿರ್ದೇಶಕರು (ಪಂ.ರಾ) ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ನರೇಗಾ ಸಿಬ್ಬಂದಿ ಹಾಗೂ ತಾ.ಪಂ. ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago