ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.
ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.
ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.
ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…