Categories: ಕೋಲಾರ

ಜಿಲ್ಲಾ ಪೊಲೀಸರಿಂದ ಶಬ್ದ ಮಾಲಿನ್ಯ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳ ವಶ : ಸುಮಾರು 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಸೈಲೆನ್ಸರ್ ಗಳ ನಾಶ

 

ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್‌ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.

ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.

ವೀಲಿಂಗ್ ಮಾಡುವವರ ಬಗ್ಗೆ ಹಾಗೂ ಲೊಕೇಷನ್ ವಿಡಿಯೋ ಕಳುಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ನಗರದ ಸಿಗ್ನಲ್ ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ದುರಸ್ತಿಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಆದಷ್ಟೂ ಬೇಗ ದುರಸ್ತಿ ಮಾಡಲಾಗುವುದು,

ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

10 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

16 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

18 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

18 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

19 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

23 hours ago