Categories: ಕೋಲಾರ

ಜಿಲ್ಲಾ ಪೊಲೀಸರಿಂದ ಶಬ್ದ ಮಾಲಿನ್ಯ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳ ವಶ : ಸುಮಾರು 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಸೈಲೆನ್ಸರ್ ಗಳ ನಾಶ

 

ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್‌ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.

ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.

ವೀಲಿಂಗ್ ಮಾಡುವವರ ಬಗ್ಗೆ ಹಾಗೂ ಲೊಕೇಷನ್ ವಿಡಿಯೋ ಕಳುಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ನಗರದ ಸಿಗ್ನಲ್ ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ದುರಸ್ತಿಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಆದಷ್ಟೂ ಬೇಗ ದುರಸ್ತಿ ಮಾಡಲಾಗುವುದು,

ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago