ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.
ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.
ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.
ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…