ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.
ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.
ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.
ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…