Categories: ಕೋಲಾರ

ಜಿಲ್ಲಾ ಪೊಲೀಸರಿಂದ ಶಬ್ದ ಮಾಲಿನ್ಯ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳ ವಶ : ಸುಮಾರು 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಸೈಲೆನ್ಸರ್ ಗಳ ನಾಶ

 

ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್‌ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.

ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.

ವೀಲಿಂಗ್ ಮಾಡುವವರ ಬಗ್ಗೆ ಹಾಗೂ ಲೊಕೇಷನ್ ವಿಡಿಯೋ ಕಳುಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ನಗರದ ಸಿಗ್ನಲ್ ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ದುರಸ್ತಿಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಆದಷ್ಟೂ ಬೇಗ ದುರಸ್ತಿ ಮಾಡಲಾಗುವುದು,

ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

11 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

12 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

15 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

22 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago