Categories: ಕೋಲಾರ

ಜಿಲ್ಲಾ ಪೊಲೀಸರಿಂದ ಶಬ್ದ ಮಾಲಿನ್ಯ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳ ವಶ : ಸುಮಾರು 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಸೈಲೆನ್ಸರ್ ಗಳ ನಾಶ

 

ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್‌ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.

ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.

ವೀಲಿಂಗ್ ಮಾಡುವವರ ಬಗ್ಗೆ ಹಾಗೂ ಲೊಕೇಷನ್ ವಿಡಿಯೋ ಕಳುಹಿಸಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ನಗರದ ಸಿಗ್ನಲ್ ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ದುರಸ್ತಿಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಆದಷ್ಟೂ ಬೇಗ ದುರಸ್ತಿ ಮಾಡಲಾಗುವುದು,

ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

2 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

12 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

14 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago