ಕೋಲಾರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರನ್ನು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬುಧವಾರ ನೇಮಕ ಮಾಡಲಾಗಿದೆ.
ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಅದರಲ್ಲಿ ಓಂಶಕ್ತಿ ಚಲಪತಿ ಅವರನ್ನು ಕೋಲಾರ ಜಿಲ್ಲಾ ಘಟಕಕ್ಕೆ ನೇಮಕ ಮಾಡಲಾಗಿದೆ ಎಂದು ಪಕ್ಷದ ಚುನಾವಣಾ ಉಸ್ತುವಾರಿ ಹಾಗೂ ಮಾಜಿ ಎಂಎಲ್ಸಿ ಅಶ್ವಥ್ ನಾರಾಯಣ ಹಾಗೂ ಜಿಲ್ಲಾ ಚುನಾವಣಾ ಸಹ ಉಸ್ತುವಾರಿ ಬಿ.ಪಿ ವೆಂಕಟಮುನಿಯಪ್ಪ ಘೋಷಣೆ ಮಾಡಿದರು.
ಕೋಲಾರ ನಗರದವರಾದ ಓಂಶಕ್ತಿ ಚಲಪತಿ ಮೂಲತಃ ಬಿಜೆಪಿ ಕಾರ್ಯಕರ್ತರಾಗಿ ಹಿಂದುತ್ವ ವಿಷಯದ ಹೋರಾಟಗಳಲ್ಲಿ ಮುಂಚೂಣಿಯ ನಾಯಕರಾಗಿದ್ದು ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿ, ಉಪಾಧ್ಯಕ್ಷರಾಗಿದ್ದರು ಇತ್ತೀಚೆಗೆ ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು 2018 ರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು ಅಲ್ಲದೇ ಕುಡಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ನೇಮಕವಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿ ಜಿಲ್ಲೆಯ ಮಾಜಿ ಸಂಸದರು ಮಾಜಿ ಶಾಸಕರು ಪಕ್ಷದ ಹಿರಿಯ ಕಿರಿಯ ಮುಖಂಡ ಮತ್ತು ಕಾರ್ಯಕರ್ತರ ಆಶೀರ್ವಾದದಿಂದ ಜಿಲ್ಲಾ ಅಧ್ಯಕ್ಷನಾಗಿದ್ದು ಅವರ ಮಾರ್ಗದರ್ಶನದಲ್ಲಿ ಇದನ್ನು ಅಧಿಕಾರ ಎಂದು ಭಾವಿಸದೇ ಜವಾಬ್ದಾರಿ ರೀತಿಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವ ಕೆಲಸವನ್ನು ಮಾಡತ್ತೇನೆ ಮುಂದೆ ಕನಿಷ್ಟ ನಾಲ್ಕು ಶಾಸಕರು ಜಿಲ್ಲೆಯಿಂದ ಆಯ್ಕೆಯಾಗುವಂತೆ ಮಾಡಿ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳು ಸರಿ ಪಡಿಸುವ ಕೆಲಸ ಮಾಡತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ವೈ ಸಂಪಂಗಿ, ಮಾಜಿ ಅಧ್ಯಕ್ಷ ವೇಣುಗೋಪಾಲ್, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಮಾಜಿ ಜಿಪಂ ಸದಸ್ಯ ಮಹೇಶ್, ವಿವಿಧ ಮೋರ್ಚಾ ಅಧ್ಯಕ್ಷರಾದ ಅರುಣಮ್ಮ, ಬಾಲಾಜಿ, ತಿಮ್ಮರಾಯಪ್ಪ, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಮಮತಮ್ಮ, ಶಿವಕುಮಾರ್, ತೇಜಸ್, ಮುಂತಾದವರು ಇದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…