ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಕಂಪನಿ ಮುಖ್ಯಸ್ಥರಿಗೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ ನಂತರ ಕೈಗಾರಿಕಾ ಪ್ರದೇಶ ವ್ಯಾಪ್ತಿ ಹೆಚ್ಚಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 10000 ಎಕರೆ ಕೈಗಾರಿಕಾ ಪ್ರದೇಶ ಇದೆ. ಹಲವಾರು ಕುಟುಂಬಗಳು ಕೈಗಾರಿಕೆಗಳಿಗೆ ಭೂಮಿ ನೀಡಿದ್ದಾರೆ. ಅಂತಹ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಸಿಗಬೇಕು ಎನ್ನುವುದು ನನ್ನ ಅಭಿಪ್ರಾಯ.

ಸರ್ಕಾರವು ಕಂಪನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಸಹಕಾರ ನೀಡುತ್ತಾ ಬಂದಿದೆ. ಕಂಪನಿಗಳು ಕೂಡ ಅದೇ ರೀತಿ ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಬೇಕು. ಸಾಕಷ್ಟು ಕುಟುಂಬಗಳಲ್ಲಿ ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಇದ್ದಾರೆ. ಅಂತಹವರ ಆಯ್ಕೆ ಮೊದಲಿರಲಿ ಎಂದರು.

ಹತ್ತು ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಇರುವ ಕಂಪನಿಗಳು ಸ್ವಂತ ತರಬೇತಿ ಸಂಸ್ಥೆ ಪ್ರಾರಂಭಿಸಿ ಕೌಶಲ್ಯಾಧರಿತ ತರಬೇತಿ ನೀಡಿ ಆಯ್ಕೆ ಮಾಡಿಕೊಂಡರೆ ಉತ್ತಮ. ಇನ್ನುಳಿದಂತೆ ಸರ್ಕಾರದ ವತಿಯಿಂದ ವಿವಿಧ ಸರ್ಕಾರಿ ತರಬೇತಿ ಸಂಸ್ಥೆಗಳ ಮೂಲಕ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು. ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುತ್ತಿಲ್ಲ ಎಂದು ಹಲವರು ತಿಳಿಸಿದ್ದಾರೆ ಈ ರೀತಿಯ ಘಟನೆಗಳು ಆಗಬಾರದು. ಯಾವ ಕಂಪನಿಗಳಲ್ಲಿ ಸ್ಥಳೀಯರಿಗೆ ಎಷ್ಟು ಉದ್ಯೋಗ ಲಭಿಸಿದೆ, ಕಂಪನಿಗಳಲ್ಲಿ ಎಷ್ಟು ಉದ್ಯೋಗ ಖಾಲಿ ಇದೆ, ಎಂತಹ ಅಭ್ಯರ್ಥಿಗಳ ಅವಶ್ಯಕತೆ ಇದೆ ಎಂಬುದರ ಬಗ್ಗೆ ಕಂಪನಿಗಳಿಂದ ಮಾಹಿತಿ ಪಡೆದು ಸಂಪೂರ್ಣ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

*ಸಿಎಸ್ಆರ್ ಅನುದಾನದಡಿ ಶಾಲೆಗಳ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ*
ಕಂಪನಿಗಳು ತಮ್ಮ ಆರ್ಥಿಕ ವಹಿವಾಟಿನಲ್ಲಿ ಶೇಕಡ 02% ರಷ್ಟು ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್) ಹಣವನ್ನು ಕಡ್ಡಾಯವಾಗಿ ವಿವಿಧ ಸಾಮಾಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳ ಶಿಕ್ಷಣ ಮುಂದಿನ ಪೀಳಿಗೆಗೆ ಸಹಕಾರ ಆಗಲಿದೆ. ಗುಣಮಟ್ಟದ ಶಿಕ್ಷಣಕ್ಕೆ ನಾವು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಿಎಸ್ಆರ್ ಅನುದಾನವನ್ನು ಶಾಲೆಗಳ ಅಭಿವೃದ್ಧಿಗೆ ಬಳಸಲು ಮೊದಲ ಪ್ರಾಶಸ್ತ್ಯ ನೀಡಿ ಎಂದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ತಾಲ್ಲೂಕು ಕೈಗಾರಿಕಾ ಸಂಘದ ಅಧ್ಯಕ್ಷರು, ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

23 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago