ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಕುಡಿಯುವ ನೀರು, ಮೇವಿಗೆ ಆದ್ಯತೆ ನೀಡಿ- ಸಚಿವ ಕೆ.ಎಚ್ ಮುನಿಯಪ್ಪ

ಮುಂಬರುವ ಬೇಸಿಗೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಬೇಸಿಗೆ ಇರುತ್ತದೆ. ಈ ಸಂದರ್ಭದಲ್ಲಿ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಯಾವುದಾದರೂ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗಿ ಕೊಳವೆ ಬಾವಿ ಕೊರೆದರೆ, ತಕ್ಷಣವೇ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಒದಗಿಸಬೇಕು. ಕುಡಿಯುವ ನೀರು ಸಮಸ್ಯೆ ಬಂದಲ್ಲಿ ಡಿಸಿ ಖಾತೆಯಲ್ಲಿ ಹಣ ಇದೆ ತಕ್ಷಣ ಹಣ ಬಿಡುಗಡೆ ಮಾಡಿ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು.

ಜಾನುವಾರುಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಮೇವಿನ ಸಮಸ್ಯೆ ಉಂಟಾಗಿಲ್ಲ ಎಂದು ಪಶು ಅಧಿಕಾರಿಗಳು ತಿಳಿಸಿದ್ದಾರೆ. ಪಶು ಇಲಾಖೆ, ಕೆಎಂಎಫ್ ಸಹಕಾರದಿಂದ ಬೇಸಿಗೆಯಲ್ಲಿ ನೀರಿರುವ ರೈತರ ಜಮೀನುಗಳಿಗೆ ಉಚಿತವಾಗಿ ಮೇವು ಕಿಟ್ ವಿತರಿಸಲಾಗುವುದು. ಜೊತೆಗೆ ಕಾಲಕಾಲಕ್ಕೆ ಜಾನುವಾರುಗಳಿಗೆ ಲಸಿಕೆ ಹಾಕಲು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ತಯಾರಿ ನಡೆಸಲಾಗಿದೆ. ಎಲ್ಲಿ ಸರ್ಕಾರಿ ಜಾಗ ಇದೆ ಅಲ್ಲಿ ನಿವೇಶನ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಾಗಲೇ ತಾಲ್ಲೂಕು ವ್ಯಾಪ್ತಿಯಲ್ಲಿ 500 ಕ್ಕಿಂತ ಹೆಚ್ಚು ಸೈಟ್ ಗಳನ್ನು ಸಿದ್ದ ಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಮುಂದಿನ 15 ದಿನದಲ್ಲಿ 1000 ಸೈಟ್ ಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಸತಿ ಯೋಜನೆಯಡಿ ಜಿಲ್ಲೆಗೆ 2500 ನಿವೇಶನ ಮಂಜೂರು ಆಗಿದೆ. ತಾಲ್ಲೂಕಿಗೆ 500 ರಂತೆ ಹಂಚಿಕೆ ಮಾಡಲಾಗುವುದು. ಮನೆ ಕಟ್ಟಲು ನಿವೇಶನ ಬೇಕು ಹಾಗಾಗಿ ಮೊದಲು ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದರು.

ಜೆಜೆಎಂ ಕಾಮಗಾರಿಯಿಂದ ಹಳ್ಳಿಗಳಲ್ಲಿ ರಸ್ತೆಗಳು ಹಾಳಾಗಿವೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಾಮಾಗಾರಿಗೆ ತೆಗೆದಿರುವ ಗುಂಡಿಗಳನ್ನು 15 ದಿನಗಳೊಳಗೆ ಮುಚ್ಚಲು ಅಧಿಕಾರಿಗಳಿಗೆ ತಿಳಿಸಿದರು.

ಇಂದಿರಾ ಕಿಟ್ ಟೆಂಡರ್ ಹಂತದಲ್ಲಿದ್ದು, ಜನವರಿ ಅಂತ್ಯಕ್ಕೆ ಇಲ್ಲವೇ ಫೆಬ್ರವರಿ ತಿಂಗಳಲ್ಲಿ ಪಡಿತರ ಅಕ್ಕಿ ಜತೆಗೆ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.

ಬೆಂಬಲ ಬೆಲೆ ಯೋಜನೆಯಡಿ ರಾಗಿ ನೋಂದಣಿಗೆ ಜಿಲ್ಲೆಯಲ್ಲಿ ಸುಮಾರು 2500 ರೈತರು ಬಾಕಿ ಉಳಿದಿದ್ದಾರೆ. ಅವರಿಗೆ ಉಪ ಸಮಿತಿಯಲ್ಲಿ ಚರ್ಚಿಸಿ ನಂತರ ತೀರ್ಮಾನಿಸಲಾಗುವುದು. ಜಿಲ್ಲೆಯಲ್ಲಿ ಒಟ್ಟು ಕೈಗಾರಿಕೆಗಳ ಸಂಖ್ಯೆ ಹಾಗೂ ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಪಟ್ಟಿ ತಯಾರಿಸಿ ತ್ವರಿತವಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

*ಪೋಡಿ ದುರಸ್ತಿಯಲ್ಲಿ 10 ನೇ ಸ್ಥಾನ*

ಪಹಣಿ ಆಗಿಲ್ಲ, ಖಾತೆ ಆಗಿಲ್ಲ, ಹದ್ದುಬಸ್ತು ಆಗಿಲ್ಲ ಅಂತ ರೈತರು ನಮ್ಮ ಬಳಿ ಬರ್ತಾರೆ. ಜಿಲ್ಲೆಯು ಪೋಡಿ ದುರಸ್ತಿಯಲ್ಲಿ 10 ನೇ ಸ್ಥಾನದಲ್ಲಿದ್ದು ಪೋಡಿ ದುರಸ್ತಿಯಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಶೀಘ್ರ ಗತಿಯಲ್ಲಿ ಪೋಡಿ ದುರಸ್ತಿ ಆಗಬೇಕು. 2026 ರ ಅಂತ್ಯದ ವೇಳೆಗೆ ಒಂದು ಹಂತಕ್ಕೆ ತರಲು ಅಧಿಕಾರಿಗಳಿಗೆ ಸೂಚಿಸಿದರು.

*ಅಧಿಕಾರಿಗಳು ಸಾರ್ವಜನಿಕರ ಸಂಪರ್ಕಕ್ಕೆ ಸಿಗಬೇಕು*

ಅಧಿಕಾರಿಗಳು, ತಹಶೀಲ್ದಾರ್ ಗಳ ಮೇಲೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಸಾರ್ವಜನಿಕರು ಕಚೇರಿಗಳಿಗೆ ಬಂದಾಗ ಸೌಜನ್ಯದಿಂದ ವರ್ತಿಸುವುದು ಮುಖ್ಯ. ತಹಶೀಲ್ದಾರರು ವಾರಕ್ಕೆ ಎರಡು ದಿನ ಸೋಮವಾರ, ಗುರುವಾರ ಸಾರ್ವಜನಿಕರ ಸಂಪರ್ಕಕ್ಕೆ ಸಿಗಬೇಕು. ಇದರಿಂದ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದರು.

ನೆಲಮಂಗಲ ಶಾಸಕರಾದ ಶ್ರೀನಿವಾಸ್ ಎನ್ ಅವರು ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇರುವುದಿಲ್ಲ, ತ್ಯಾಮಗೊಂಡ್ಲು ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿಂದ ಅಂಬುಲೆನ್ಸ್ ಇಲ್ಲದೇ ರೋಗಿಗಳ ಪರದಾಟ ಅನುಭವಿಸುತ್ತಿದ್ದರು, ನಾನು ಸಂಪರ್ಕಿಸಿದ ನಂತರ ಅಂಬುಲೆನ್ಸ್ ಸೇವೆ ಸರಿಪಡಿಸಿದ್ದಾರೆ. ನೆಲಮಂಗಲದಲ್ಲಿ 31 ವಾರ್ಡ್ಗಳಿದ್ದು, 15 ನ್ಯಾಯಬೆಲೆ ಅಂಗಡಿ ಅವಶ್ಯಕತೆ ಇದೆ ಇದರ ಬಗ್ಗೆ ಕ್ರಮ ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆಯಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳೆಯರಿಗೆ ಮೀನು ಮರಿಗಳನ್ನು ವಿತರಣೆ ಮಾಡಲಾಯಿತು.

ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಹೆಗಡೆ, ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಚಂದ್ರಕಾಂತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

1 hour ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

7 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

8 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

20 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

21 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

24 hours ago