ಜಿಲ್ಲಾ ಮಟ್ಟದ ಮಾವು-ಹಲಸು ಮೇಳ ಉದ್ಘಾಟಿಸಿದ ಸಚಿವ ಕೆ.ಎಚ್. ಮುನಿಯಪ್ಪ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

*ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ*

ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

9 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

19 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

20 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago