ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.
ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.
ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.
ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.
*ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ*
ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).
ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.
ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…