ಜಿಲ್ಲಾ ಮಟ್ಟದ ಮಾವು-ಹಲಸು ಮೇಳ ಉದ್ಘಾಟಿಸಿದ ಸಚಿವ ಕೆ.ಎಚ್. ಮುನಿಯಪ್ಪ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

*ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ*

ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.

Ramesh Babu

Journalist

Recent Posts

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

3 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

3 hours ago

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

13 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

14 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

19 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

20 hours ago