ಜಿಲ್ಲಾ ಮಟ್ಟದ ಮಾವು-ಹಲಸು ಮೇಳ ಉದ್ಘಾಟಿಸಿದ ಸಚಿವ ಕೆ.ಎಚ್. ಮುನಿಯಪ್ಪ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

*ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ*

ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago