ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ:1033 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಮತ್ತು ಇತರೆ ಎಲ್ಲೆಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂಬ ಅಂಕಿ ಅಂಶಗಳನ್ನು ಸಂಗ್ರಹಿಸಿ ಪದೇ ಪದೇ ಅಪಘಾತವಾಗಿದ್ದಲ್ಲಿ ಆ ಸ್ಥಳವನ್ನು ಜಂಟಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಿ ಅಪಘಾತ ವಲಯದಿಂದ ಮುಕ್ತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

*ವೇಗದ ಚಾಲನೆಗೆ ಕಡಿವಾಣ ಹಾಕಿ*

ಜಿಲ್ಲೆಯಲ್ಲಿ ಹೊಸದಾಗಿ ನೆಲಮಂಗಲದ ದಾಬಸ್ ಪೇಟೆಯಿಂದ ಹೊಸಕೋಟೆವರೆಗೂ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ನಡೆಯುತ್ತಿದೆ. ಈ ರಸ್ತೆಗಳಲ್ಲಿ ವಾಹನಗಳು ನಿಗದಿತ ವೇಗಕ್ಕಿಂತ ಹೆಚ್ಚು ವೇಗವಾಗಿ ಚಲಿಸುವುದಕ್ಕೆ ಕಡಿವಾಣ ಹಾಕಬೇಕು. ವೇಗವಾಗಿ ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತಗಳು ಉಂಟಾಗುವ ಸಂಭವ ಹೆಚ್ಚಾಗಿದ್ದು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಅಪಘಾತ ತಡೆಗೆ ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆ ದಾಟುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವ ಜೊತೆಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಕೆಲವು ಕಡೆ ಸರ್ವಿಸ್ ರೋಡ್ ಹಾಗೂ ಕೆಳ ಸೇತುವೆ(ಅಂಡರ್ ಪಾಸ್) ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಕಡ್ಡಾಯವಾಗಿ ಅವಶ್ಯಕತೆ ಇರುವ ರಸ್ತೆ ಭಾಗಗಳಲ್ಲಿ ಸೂಚನಾ ಫಲಕಗಳು(ಸೈನ್ ಬೋರ್ಡ್), ಹಂಸ್ ಗಳು, ರಸ್ತೆ ದುರಸ್ತಿ ಕಾಮಗಾರಿಗಳ ಸ್ಥಳಗಳಲ್ಲಿ ಸೈನ್ ಬೋರ್ಡ್ ಅಳವಡಿಕೆ, ಇತರೆ ಇಲಾಖೆಗಳು ನಡೆಸುವ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವಾಗ, ಗುಂಡಿಗಳನ್ನು ತೆಗೆದಾಗ ಅಲ್ಲಿ ಕಡ್ಡಾಯವಾಗಿ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿ ಬ್ಯಾರಿಕೇಡ್ ಅಳವಡಿಸಬೇಕು ಎಂದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಫ್ರೀ “1033” ಸಹಾಯವಾಣಿ ಸಂಖ್ಯೆಯನ್ನು
ತುರ್ತು/ತುರ್ತು ಅಲ್ಲದ ಸಮಸ್ಯೆಗಳ ಸಂಭವವಿದ್ದಲ್ಲಿ 24×7 ಸೇವೆಯನ್ನು ನೀಡಲು ಪ್ರಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಿದರೆ ಕೂಡಲೇ ‘1033’ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ತುರ್ತು ಅಂಬುಲೆನ್ಸ್ ಸೇವೆಯನ್ನು ಒದಗಿಸಲಾಗುತ್ತದೆ ಎಂದರು.

ರಸ್ತೆಗಳಲ್ಲಿ ಅಪಘಾತ ಸಂಭವಿಸಿ ಪ್ರಾಣಾಪಾಯದಿಂದ ಪಾರಾಗುವ ಸಂಭವ ಹೆಚ್ಚಿದ್ದಾಗ ಅಮೂಲ್ಯ ಸಮಯ(ಗೋಲ್ಡನ್ ಅವರ್ಸ್) ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಮಾಹಿತಿ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸಮಯ ವ್ಯರ್ಥಮಾಡದೆ ಕಾರ್ಯಪ್ರವೃತ್ತರಾಗಿ ಅಪಘಾತವಾದ ವ್ಯಕ್ತಿಯನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ ಎಂದರು.

ಸಭೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

60 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

8 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago