ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ:1033 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಮತ್ತು ಇತರೆ ಎಲ್ಲೆಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂಬ ಅಂಕಿ ಅಂಶಗಳನ್ನು ಸಂಗ್ರಹಿಸಿ ಪದೇ ಪದೇ ಅಪಘಾತವಾಗಿದ್ದಲ್ಲಿ ಆ ಸ್ಥಳವನ್ನು ಜಂಟಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಿ ಅಪಘಾತ ವಲಯದಿಂದ ಮುಕ್ತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

*ವೇಗದ ಚಾಲನೆಗೆ ಕಡಿವಾಣ ಹಾಕಿ*

ಜಿಲ್ಲೆಯಲ್ಲಿ ಹೊಸದಾಗಿ ನೆಲಮಂಗಲದ ದಾಬಸ್ ಪೇಟೆಯಿಂದ ಹೊಸಕೋಟೆವರೆಗೂ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ನಡೆಯುತ್ತಿದೆ. ಈ ರಸ್ತೆಗಳಲ್ಲಿ ವಾಹನಗಳು ನಿಗದಿತ ವೇಗಕ್ಕಿಂತ ಹೆಚ್ಚು ವೇಗವಾಗಿ ಚಲಿಸುವುದಕ್ಕೆ ಕಡಿವಾಣ ಹಾಕಬೇಕು. ವೇಗವಾಗಿ ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತಗಳು ಉಂಟಾಗುವ ಸಂಭವ ಹೆಚ್ಚಾಗಿದ್ದು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಅಪಘಾತ ತಡೆಗೆ ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆ ದಾಟುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವ ಜೊತೆಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಕೆಲವು ಕಡೆ ಸರ್ವಿಸ್ ರೋಡ್ ಹಾಗೂ ಕೆಳ ಸೇತುವೆ(ಅಂಡರ್ ಪಾಸ್) ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಕಡ್ಡಾಯವಾಗಿ ಅವಶ್ಯಕತೆ ಇರುವ ರಸ್ತೆ ಭಾಗಗಳಲ್ಲಿ ಸೂಚನಾ ಫಲಕಗಳು(ಸೈನ್ ಬೋರ್ಡ್), ಹಂಸ್ ಗಳು, ರಸ್ತೆ ದುರಸ್ತಿ ಕಾಮಗಾರಿಗಳ ಸ್ಥಳಗಳಲ್ಲಿ ಸೈನ್ ಬೋರ್ಡ್ ಅಳವಡಿಕೆ, ಇತರೆ ಇಲಾಖೆಗಳು ನಡೆಸುವ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವಾಗ, ಗುಂಡಿಗಳನ್ನು ತೆಗೆದಾಗ ಅಲ್ಲಿ ಕಡ್ಡಾಯವಾಗಿ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿ ಬ್ಯಾರಿಕೇಡ್ ಅಳವಡಿಸಬೇಕು ಎಂದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಫ್ರೀ “1033” ಸಹಾಯವಾಣಿ ಸಂಖ್ಯೆಯನ್ನು
ತುರ್ತು/ತುರ್ತು ಅಲ್ಲದ ಸಮಸ್ಯೆಗಳ ಸಂಭವವಿದ್ದಲ್ಲಿ 24×7 ಸೇವೆಯನ್ನು ನೀಡಲು ಪ್ರಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಿದರೆ ಕೂಡಲೇ ‘1033’ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ತುರ್ತು ಅಂಬುಲೆನ್ಸ್ ಸೇವೆಯನ್ನು ಒದಗಿಸಲಾಗುತ್ತದೆ ಎಂದರು.

ರಸ್ತೆಗಳಲ್ಲಿ ಅಪಘಾತ ಸಂಭವಿಸಿ ಪ್ರಾಣಾಪಾಯದಿಂದ ಪಾರಾಗುವ ಸಂಭವ ಹೆಚ್ಚಿದ್ದಾಗ ಅಮೂಲ್ಯ ಸಮಯ(ಗೋಲ್ಡನ್ ಅವರ್ಸ್) ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಮಾಹಿತಿ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸಮಯ ವ್ಯರ್ಥಮಾಡದೆ ಕಾರ್ಯಪ್ರವೃತ್ತರಾಗಿ ಅಪಘಾತವಾದ ವ್ಯಕ್ತಿಯನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ ಎಂದರು.

ಸಭೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

17 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

23 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago