ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ: ಮುಂದಿನ 2 ವರ್ಷಗಳಲ್ಲಿ 101 ಶಾಲೆಗಳ ಅಭಿವೃದ್ಧಿ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ, ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತರತ್ನ ಡಾ. ಎಸ್. ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು, ಉತ್ತಮ ಶಿಕ್ಷಕರಾಗಿ ದೇಶ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠರು. ಶಿಕ್ಷಕರು ಮಕ್ಕಳಿಗೆ ತಿದ್ದಿ, ಬುದ್ಧಿ ಹೇಳಿ ಒಳ್ಳೆಯ ಸಂಸ್ಕಾರ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವದರ ಮೇಲೆ ರಾಷ್ಟ್ರದ ಭವಿಷ್ಯ ನಿಂತಿದೆ. ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ ಪಡೆಯುವ ಜತೆಗೆ ಅವರನ್ನು ಪ್ರೀತಿ ಗೌರವಿಸುವದನ್ನು ಪಾಲಿಸಿದರೆ ಜೀವನ ಉಜ್ವಲವಾಗುತ್ತದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗಿದೆ. ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗುರ್ತಿಸಲಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲೆಗೆ 7 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿ.ಎಸ್.ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿನ 101 ಮುಖ್ಯ ಶಾಲೆಗಳನ್ನು ಮುಂದಿನ 2 ವರ್ಷಗಳಲ್ಲಿ ನವೀಕರಣಗೊಳಿಸಲಾಗುವುದು. ಆಟದ ಮೈದಾನ, ಕುಡಿಯುವ ನೀರು ಸೌಲಭ್ಯ, ಶೌಚಾಲಯ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಆಧುನಿಕವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರು ಸಮಾಜಕ್ಕೆ ಅನನ್ಯ ಸೇವೆ ನೀಡಿದ್ದಾರೆ. ಮಕ್ಕಳಿಗೆ ತಂದೆ-ತಾಯಿಯ ನಂತರದ ಸ್ಥಾನದಲ್ಲಿ ಶಿಕ್ಷಕರು ನಿಂತು ಸಂಸ್ಕಾರ, ಜ್ಞಾನಾರ್ಜನೆ ತುಂಬುವ ಕೆಲಸ ಮಾಡುತ್ತಾರೆ. ಪ್ರತಿಯೊಬ್ಬ ಶಿಕ್ಷಕರು ತಮ್ಮ ಮಕ್ಕಳಂತೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕಲಿಸುವಲ್ಲಿ ಮತ್ತು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಾಗೇಪಲ್ಲಿ ತಾಲೂಕಿನ ಸೂರಪಲ್ಲಿಯ ಆನಂದಾಶ್ರಮದ ಅಧ್ಯಕ್ಷ ಸೂರ್ಯನಾರಾಯಣಸ್ವಾಮಿ ಅವರು ವಿಶೇಷ ಉಪನ್ಯಾಸವನ್ನು ನೀಡಿದರು.

 ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ 19 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ 40 ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್, ಶಿವಶಂಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇ.ಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

7 minutes ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

3 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

4 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

12 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

22 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

23 hours ago