ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ.
1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆಯ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆಯು ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯವೂ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.
*ರಾಗಿ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮಾಹಿತಿ*
ಕೃಷಿ ಆಧಾರಿತ ಬೆಳೆ ರಾಗಿ. ಹೆಚ್ಚಿನ ರೈತರು ರಾಗಿ ಬೆಳೆಯುತ್ತಾರೆ. ಲಾಭದಾಯಕ ಬೆಳೆ ಅಲ್ಲದಿದ್ದರೂ ಅದಕ್ಕೆ ಬೆಂಬಲ ಬೆಲೆ ಹೆಚ್ಚಿಸಬೇಕು ಎಂಬ ಉದ್ದೇಶವಿತ್ತು. ಹೀಗಾಗಿ ರಾಗಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರದ ಮಂತ್ರಿಗಳಾದ ಪಿಯುಶ್ ಗೋಯಲ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ರಾಗಿ ಬೆಳೆ ಬೆಳೆಯಲು ಆಗುವಂತಹ ಕರ್ಚು ವೆಚ್ಚ, ಲಾಭ ನಷ್ಟದ ಬಗ್ಗೆ ತಿಳಿಸಲಾಯಿತು. ಇದಕ್ಕೆ ಕೇಂದ್ರ ಮಂತ್ರಿಗಳು ಸ್ಪಂದಿಸಿ ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಪಡಿಸಲು ಸಹಕಾರಿಯಾಯಿತು ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ, ತೋಟಗಾರಿಕೆ, ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಆತ್ಮಶ್ರೇಷ್ಠ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾಲೂಕು ಪಂಚಾಯತ್ ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…