ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ: ಸಿರಿಧಾನ್ಯ ಆಹಾರ ಸೇವೆಯಿಂದ ಆರೋಗ್ಯ ವೃದ್ಧಿ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದು
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ “ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ-2026” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ, ಕೊಟ್ಟಿಗೆ ಗೊಬ್ಬರದ ಸಾವಯವ ಪದ್ದತಿ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ತಕ್ಷಣಕ್ಕೆ ರುಚಿ ಕೊಟ್ಟು, ಪೌಷ್ಟಿಕತೆ ಕಡಿಮೆ ಜತೆಗೆ ಆರೋಗ್ಯ ಕ್ಷೀಣಿಸಲು ನಾವೇ ದಾರಿ ಮಾಡಿಕೊಟ್ಟಂತೆ ಎಂದರು.

ಸರ್ಕಾರವು ರೈತರ ಉತ್ಪನ್ನಗಳಿಗೆ ಬೆಲೆ ನೀಡಿ, ಉತ್ತಮ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಬೇಕು. ನಮ್ಮ ರೈತರು ಗುಣಮಟ್ಟದ ಬೆಳೆಗಳು ಬೆಳೆಯುತ್ತಿದ್ದು, ವಿದೇಶಗಳಿಗೆ ಆಹಾರ ಪದಾರ್ಥಗಳು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಪ್ತು ಆಗುತ್ತಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಕೃಷಿ ಇಲಾಖೆಯಿಂದ ಜಿಲ್ಲೆಯ ರೈತರಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷ ‘ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ’ದಂತಹ ಕೃಷಿ ಕಾರ್ಯಕ್ರಮಗಳು ಆಯೋಜಿಸಿ, ಇಲಾಖೆಯ ಯೋಜನೆಗಳು ಹಾಗೂ ಹೊಸ ಕೃಷಿ ಸಂಬಂಧಿ ಪರಿಕರಗಳ ಪರಿಚಯ ಮಾಡಿಕೊಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳದಲ್ಲಿ ಸಿರಿಧಾನ್ಯಗಳಿಂದ ಅಲಂಕರಿಸಲ್ಪಟ ರಂಗೋಲಿಯು ಎಲ್ಲರ ಗಮನ ಸೆಳೆಯಿತು.

*ಜಿಲ್ಲೆಯ ವಿವಿಧ ಭಾಗದ 45 ಜನ ಸ್ಪರ್ಧೆಯಲ್ಲಿ ಭಾಗಿ:*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾನಾ ಭಾಗಗಳಿಂದ ಜನ “ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಸ್ಪರ್ಧೆ”ಯಲ್ಲಿ 45 ಜನ ಮಹಿಳೆಯರು ಭಾಗವಹಿಸಿ, ಪಾಕ ಸ್ಪರ್ಧೆಯಲ್ಲಿ ತಮ್ಮ ಕೈಚಳಕದಿಂದ ತಯಾರಿಸಿದ ರಾಗಿ ಉಪ್ಪಿಟ್ಟು, ಕರದಂಟು, ನವಣೆ ಪಲಾವ್, ಸಜ್ಜೆ ಲಾಡು, ಅಗಸೆ ಮಜ್ಜಿಗೆ, ಮೆಂತ್ಯೆ ಕಡುಬು ಮತ್ತು ಸಿರಿಧಾನ್ಯಗಳ ಪಾಯಸ ಸೇರಿದಂತೆ ವಿವಿಧ ಖಾದ್ಯಗಳನ್ನು ಪ್ರದರ್ಶಿಸಿದರು.

*ಗಮನ ಸೆಳೆದ ಹಳೆಯ ಹಾಗೂ ಆಧುನಿಕ ವಸ್ತು ಪ್ರದರ್ಶನ:*

ಕಿಸಾನ್ ಮೇಳದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಿಕರು ದಿನಬಳಕೆ ಮಾಡುತ್ತಿದ್ದ ಪಾರಂಪರೀಕ ವಸ್ತುಗಳು, ಲೋಹಗಳು, ಮಶೀನ್ ಗಳನ್ನು ಸೇರಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆಗಳು ಇಲಾಖಾ ಯೋಜನೆಗಳ ಕುರಿತು ಮಾಹಿತಿಯನ್ನೊಳಗೊಂಡ ವಸ್ತು ಪ್ರದರ್ಶನವನ್ನು ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ. ಜಗನ್ನಾಥ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್ ಆರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಂಕಜ ಹೆಚ್, ದೊಡ್ಡಬಳ್ಳಾಪುರ ಕೆಪಿಸಿಸಿ ಸದಸ್ಯ ಎಸ್. ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಕೃಷಿ ಸಮಾಜದ ತಾಲೂಕು ಅಧ್ಯಕ್ಷ ಮುರುಳಿಧರ್, ನಾಲ್ಕು ತಾಲೂಕುಗಳ ಕೃಷಿಕ ಸಮಾಜದ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago