ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದು
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ “ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ-2026” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ, ಕೊಟ್ಟಿಗೆ ಗೊಬ್ಬರದ ಸಾವಯವ ಪದ್ದತಿ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ತಕ್ಷಣಕ್ಕೆ ರುಚಿ ಕೊಟ್ಟು, ಪೌಷ್ಟಿಕತೆ ಕಡಿಮೆ ಜತೆಗೆ ಆರೋಗ್ಯ ಕ್ಷೀಣಿಸಲು ನಾವೇ ದಾರಿ ಮಾಡಿಕೊಟ್ಟಂತೆ ಎಂದರು.
ಸರ್ಕಾರವು ರೈತರ ಉತ್ಪನ್ನಗಳಿಗೆ ಬೆಲೆ ನೀಡಿ, ಉತ್ತಮ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಬೇಕು. ನಮ್ಮ ರೈತರು ಗುಣಮಟ್ಟದ ಬೆಳೆಗಳು ಬೆಳೆಯುತ್ತಿದ್ದು, ವಿದೇಶಗಳಿಗೆ ಆಹಾರ ಪದಾರ್ಥಗಳು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಪ್ತು ಆಗುತ್ತಿದೆ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಕೃಷಿ ಇಲಾಖೆಯಿಂದ ಜಿಲ್ಲೆಯ ರೈತರಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷ ‘ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ’ದಂತಹ ಕೃಷಿ ಕಾರ್ಯಕ್ರಮಗಳು ಆಯೋಜಿಸಿ, ಇಲಾಖೆಯ ಯೋಜನೆಗಳು ಹಾಗೂ ಹೊಸ ಕೃಷಿ ಸಂಬಂಧಿ ಪರಿಕರಗಳ ಪರಿಚಯ ಮಾಡಿಕೊಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳದಲ್ಲಿ ಸಿರಿಧಾನ್ಯಗಳಿಂದ ಅಲಂಕರಿಸಲ್ಪಟ ರಂಗೋಲಿಯು ಎಲ್ಲರ ಗಮನ ಸೆಳೆಯಿತು.
*ಜಿಲ್ಲೆಯ ವಿವಿಧ ಭಾಗದ 45 ಜನ ಸ್ಪರ್ಧೆಯಲ್ಲಿ ಭಾಗಿ:*
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾನಾ ಭಾಗಗಳಿಂದ ಜನ “ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಸ್ಪರ್ಧೆ”ಯಲ್ಲಿ 45 ಜನ ಮಹಿಳೆಯರು ಭಾಗವಹಿಸಿ, ಪಾಕ ಸ್ಪರ್ಧೆಯಲ್ಲಿ ತಮ್ಮ ಕೈಚಳಕದಿಂದ ತಯಾರಿಸಿದ ರಾಗಿ ಉಪ್ಪಿಟ್ಟು, ಕರದಂಟು, ನವಣೆ ಪಲಾವ್, ಸಜ್ಜೆ ಲಾಡು, ಅಗಸೆ ಮಜ್ಜಿಗೆ, ಮೆಂತ್ಯೆ ಕಡುಬು ಮತ್ತು ಸಿರಿಧಾನ್ಯಗಳ ಪಾಯಸ ಸೇರಿದಂತೆ ವಿವಿಧ ಖಾದ್ಯಗಳನ್ನು ಪ್ರದರ್ಶಿಸಿದರು.
*ಗಮನ ಸೆಳೆದ ಹಳೆಯ ಹಾಗೂ ಆಧುನಿಕ ವಸ್ತು ಪ್ರದರ್ಶನ:*
ಕಿಸಾನ್ ಮೇಳದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಿಕರು ದಿನಬಳಕೆ ಮಾಡುತ್ತಿದ್ದ ಪಾರಂಪರೀಕ ವಸ್ತುಗಳು, ಲೋಹಗಳು, ಮಶೀನ್ ಗಳನ್ನು ಸೇರಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆಗಳು ಇಲಾಖಾ ಯೋಜನೆಗಳ ಕುರಿತು ಮಾಹಿತಿಯನ್ನೊಳಗೊಂಡ ವಸ್ತು ಪ್ರದರ್ಶನವನ್ನು ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ. ಜಗನ್ನಾಥ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್ ಆರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಂಕಜ ಹೆಚ್, ದೊಡ್ಡಬಳ್ಳಾಪುರ ಕೆಪಿಸಿಸಿ ಸದಸ್ಯ ಎಸ್. ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ಕೃಷಿ ಸಮಾಜದ ತಾಲೂಕು ಅಧ್ಯಕ್ಷ ಮುರುಳಿಧರ್, ನಾಲ್ಕು ತಾಲೂಕುಗಳ ಕೃಷಿಕ ಸಮಾಜದ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…