ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.
ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.
ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…