ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

12 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

18 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago