ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago