ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.
ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.
ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…