ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…

14 hours ago

101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ…

15 hours ago

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೋರ್ಸ್ ಗಳ ದಾಖಲಾತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ…

16 hours ago

ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು-ಸಚಿವ ಕೆ.ಎಚ್ ಮುನಿಯಪ್ಪ

ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು…

16 hours ago

ಬೇಸಿಗೆ ಬಿಸಿಲು: ನಮ್ಮ ರಾಜ್ಯ ಮತ್ತು ದೇಶ ಅಕ್ಷರಶಃ ಬೆಂಕಿಯಂತೆ ಸುಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ

ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು…

21 hours ago

ತಾಲೂಕು ಜೆಡಿಎಸ್ ಗೆ ಹೊಸ ಟೀಂ: ಮುಂದೆ ಮುನೇಗೌಡರ ನಡೆ ಏನು…? “ಪಬ್ಲಿಕ್ ಮಿರ್ಚಿ” ಜೊತೆ ಮುನೇಗೌಡರ ಮನದಾಳದ ಮಾತೇನು..? ನೂತನ ಸಾರಥಿ ಹರೀಶ್ ಗೌಡ ಹೇಳಿದ್ದೇನು…?

ಪಕ್ಷ ನಿಂತ ನೀರಲ್ಲ ಎಂಬುದನ್ನು ಸಾಬೀತುಪಡಿಸಲು ಜನತಾದಳ (ಜಾತ್ಯತೀತ) ಪಕ್ಷದಲ್ಲಿ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತರಲಾಗಿದೆ.. ರಾಜ್ಯ, ಜಿಲ್ಲಾ ಹಾಗೂ…

1 day ago