ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago