ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ದೊರಕಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

2 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

6 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

10 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago