ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.
ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.
ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.
ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.
ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.
1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.
ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…