ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ದೊರಕಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago